ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಹೇಳಿರುವುದು ಸ್ವಾಗತಾರ್ಹ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಉಪ ಚುನಾವಣೆಯಲ್ಲಿ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತದೆ. ಬಿಜೆಪಿ ಸರ್ಕಾರ ಉಳಿದ ಅವಧಿ ಪೂರ್ಣಗೊಳಿಸುತ್ತದೆ. ಯಾರ ನೆರವೂ ಇಲ್ಲದೆ ಸ್ವತಂತ್ರವಾಗಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.
ಜನರ ಸಂಕಷ್ಟಗಳಿಗೆ ಸ್ಪಂದಿಸದ ಪರಿಣಾಮ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿತು. ಬರ, ನೆರೆ ಸಮಯದಲ್ಲಿ ಮುಖ್ಯಮಂತ್ರಿ, ಸಚಿವರು ಸ್ಪಂದಿಸಲಿಲ್ಲ. ಈಗ ಬಿಜೆಪಿ ವಿರುದ್ಧ ಅನಗತ್ಯ ಟೀಕೆ ಮಾಡುತ್ತಿದ್ದಾರೆ. ಸಂತ್ರಸ್ತರರ ನೆರವಿಗೆ ಸರ್ಕಾರ ಶ್ರಮಿಸುತ್ತಿದೆ. ಎಲ್ಲ ಸಂತ್ರಸ್ಥರಿಗೂ ತಕ್ಷಣದ ಪರಿಹಾರವಾಗಿ ₨ 10 ಸಾವಿರ, ಮನೆ ಕಳೆದುಕೊಂಡವರಿಗೆ ₨1 ಲಕ್ಷ ನೀಡಲಾಗಿದೆ. ಜನರ ನಿರೀಕ್ಷೆ ಮೀರಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.