ಶಿವಮೊಗ್ಗ: ಕುವೆಂಪು ವಿಶ್ವ ವಿದ್ಯಾಲಯದ ನೂತನ ಕುಲಸಚಿವರಾಗಿ (ಮೌಲ್ಯ ಮಾಪನ) ಪ್ರೊ.ಸಿ.ಎಂ.ತ್ಯಾಗರಾಜ್ ಅವರನ್ನು ನೇಮಕಗೊಳಿಸಿ ಸರ್ಕಾರ ಅದೇಶಿಸಿದೆ.
ಪ್ರೊ.ಸಿ.ಎಂ.ತ್ಯಾಗರಾಜ್ ಅವರು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ವ್ಯವಹಾರ ನಿರ್ವಹಣೆ ವಿಭಾಗದ ಪ್ರಾಧ್ಯಾಪಕರಾಗಿದ್ದರು. ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಪ್ರೊ.ಪಿ.ಕಣ್ಣನ್ ಅವರನ್ನು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯುವಂತೆ ಆದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.