ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವಆಯೋಜಿಸಲುರಾಜ್ಯಪಾಲರು ಸಮ್ಮತಿಸಿದ್ದಾರೆ. ಜುಲೈ 28, ಅಥವಾ 29ರಂದು ನಡೆಸಲು ಸಿಂಡಿಕೇಟ್ ಸಹ ಅನುಮೋದಿಸಿದೆ ಎಂದು ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.
ಈ ವರ್ಷದ ಫೆಬ್ರುವರಿ ಅಥವಾ ಮಾರ್ಚ್ನಲ್ಲಿ ಘಟಿಕೋತ್ಸವನಡೆಯಬೇಕಿತ್ತು. ನಂತರ ಕೊರೊನಾ ನಿರ್ಬಂಧಗಳ ಕಾರಣವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ್ದ ಮನವಿಗೆ ರಾಜ್ಯಪಾಲ ವಜ್ಜುಭಾಯಿ ವಾಲಾ ಸ್ಪಂದಿಸಿದ್ದಾರೆ. ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಲುಸೂಚಿಸಿದ್ದಾರೆ. ಅನುಮತಿಕೋರಿ ಜಿಲ್ಲಾಧಿಕಾರಿಗೆಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆಂತರಿಕ ಘಟಿಕೋತ್ಸವ, ಪೋಷಕರಿಗಿಲ್ಲ ಪ್ರವೇಶ:ಕೊರೊನಾ ಸೋಂಕು ಹೆಚ್ಚುತ್ತಿರುವ ಪರಿಣಾಮ ‘ಇನ್ ಹೌಸ್’ (ಆಂತರಿಕವಾಗಿ)ಮಾದರಿಯಲ್ಲಿ ಆಯೋಜಿಸಲಾಗುವುದು. ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ಅಂತರ ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವ ನಡೆಸಲಾಗುವುದು. ರ್ಯಾಂಕ್ವಿಜೇತರು, ಪಿಎಚ್.ಡಿ ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500ಆಹ್ವಾನಿತರಿಗೆ ಅವಕಾಶ ನೀಡಲಾಗುವುದು.ಪೋಷಕರು, ಸಾರ್ವಜನಿಕರಿಗೆ ಪ್ರವೇಶಇಲ್ಲ ಎಂದುಖಚಿತಪಡಿಸಿದ್ದಾರೆ.
ಜೇಷ್ಠತಾ ಪಟ್ಟಿಗೆ ಅನುಮೋದನೆ:ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅನುಷ್ಠಾನಗೊಳಿಸಲು ಸಭೆಒಪ್ಪಿಗೆ ನೀಡಿದೆ. ಬಡ್ತಿ ಮತ್ತ ವೇತನ ಸವಲತ್ತು ಪರಿಗಣಿಸಿ ಅರ್ಹ ಸಿಬ್ಬಂದಿಗೆ ಒದಗಿಸಲುತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.