ಶಿವಮೊಗ್ಗ: ನಗರದ ಹಲವು ಬಡಾವಣೆಗಳಲ್ಲಿ ಬೀದಿಬದಿ ನಿಲ್ಲಿಸಿದ್ದ ವಾಹನಗಳಿಗೆ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ನಗರದ ಎನ್.ಟಿ. ರಸ್ತೆ, ಇಲಿಯಾಸ್ ನಗರ, ನ್ಯೂಮಂಡ್ಲಿ, ಸವಾಯ್ ಪಾಳ್ಯ, ಸೀಗೆಹಟ್ಟಿ ಬಡಾವಣೆಗಳಲ್ಲಿ ಈ ಕೃತ್ಯ ನಡೆದಿದೆ.
ಬೈಕ್ಗಳಲ್ಲಿ ಬಂದ ಕಿಡಿಗೇಡಿಗಳು ಲಾರಿ, ಹಣ್ಣಿನ ಗಾಡಿ, ಆಟೊರಿಕ್ಷಾ, ಟಾಟಾ ಸರಕು ಸಾಗಣೆ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ವಾಹನಗಳ ಮಾಲೀಕರು ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.