ಶಿರಾಳಕೊಪ್ಪ: ಸಮೀಪದ ತೊಗರ್ಸಿ ಗ್ರಾಮದ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನಗಳನ್ನು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಸಂಬಂಧ 10ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 4 ಟಾಟಾ ಏಸ್, 3 ಅಶೋಕ ಲೈಲ್ಯಾಂಡ್, 1 ಬೊಲೆರೋ ಪಿಕಪ್ ಸೇರಿ ಒಟ್ಟು 7 ಗಾಡಿಗಳಲ್ಲಿ 18 ಎಮ್ಮೆ, 37 ಹಸು ಹಾಗೂ 4 ಕರುಗಳನ್ನು ರಕ್ಷಿಸಿ ಹಾವೇರಿ ಜಿಲ್ಲೆಯ ಸಂಗೂರಿನ ಗೋ ಶಾಲೆಗೆ ರವಾನಿಸಲಾಗಿದೆ. 3 ಒಂಟೆಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.