ADVERTISEMENT

ಗೋಮಾಂಸ ಸಾಗಣೆ: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2023, 15:48 IST
Last Updated 3 ನವೆಂಬರ್ 2023, 15:48 IST
   

ಸಾಗರ: ಬೈಕ್‌ನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಾಳಕೊಪ್ಪದಿಂದ ಬೈಕ್‌ನಲ್ಲಿ 30 ಕೆ.ಜಿ. ಗೋಮಾಂಸ ಸಾಗಣೆ ಮಾಡುತ್ತಿದ್ದ ಜಬೀವುಲ್ಲಾ ಎಂಬಾತನನ್ನು ಸೊರಬ– ಸಾಗರ ಬೈಪಾಸ್ ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ.

ನಗರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಸೀತಾರಾಮ್, ಸಬ್ಇನ್‌ಸ್ಪೆಕ್ಟರ್ ನಾಗರಾಜ್, ಅಪರಾಧ ಪತ್ತೆ ದಳದ ಸಿಬ್ಬಂದಿ ಯೋಗೇಶ್, ವಿಶ್ವಾಸ್, ವಿಕಾಸ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.