ಶಿವಮೊಗ್ಗ: ಗಾಡಿಕೊಪ್ಪ ಗ್ರಾಮದಿಂದ ಪುರದಾಳು ಗ್ರಾಮಕ್ಕೆ ಹೋಗುವ ರಸ್ತೆಯ ಚಾನಲ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಕಲ್ಲಹಳ್ಳಿ ಹುಡ್ಕೋ ಕಾಲೊನಿಯ ಕಿರಣ್ ಕುಮಾರ್ (30) ಬಂಧಿತ ಆರೋಪಿ. ಆತನಿಂದ ₹15,000 ಮೌಲ್ಯದ 400 ಗ್ರಾಂ ತೂಕದ ಒಣ ಗಾಂಜಾ ಮತ್ತು ₹950 ನಗದು ಹಣ ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.