ADVERTISEMENT

ಕಾಂಗ್ರೆಸ್ ನಾಯಕರ ಮನೆ ಮೇಲೆ ಇ.ಡಿ ದಾಳಿಗೆ ಸಚಿವ ಆರಗ ಜ್ಞಾನೇಂದ್ರ ಸಮರ್ಥನೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 15:17 IST
Last Updated 5 ಆಗಸ್ಟ್ 2021, 15:17 IST

ಶಿವಮೊಗ್ಗ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್‌ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದರಷ್ಟೆ ಸಾಲದು, ಅಕ್ರಮವಾಗಿ ಗಳಿಸಿದ ಹಣ ದೇಶದ ಉಪಯೋಗಕ್ಕೆ ಬಳಸಬೇಕು ಎಂದು ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಸಮಾಜ ದ್ರೋಹಿ ಕೆಲಸ ಮಾಡಿ ಕೆಟ್ಟ ಹಣ ಗಳಿಸುವವರ ಮುಖವಾಡ ಕಳಚುವ ಕೆಲಸ ನಡೆದಿದೆ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT