ADVERTISEMENT

ಮಳೆಯ ಆರ್ಭಟ: ಭದ್ರಾ ಜಲಾಶಯಕ್ಕೆ 2 ಅಡಿ ನೀರು

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 13:38 IST
Last Updated 19 ಜೂನ್ 2021, 13:38 IST
ಭದ್ರಾ ಜಲಾಶಯ
ಭದ್ರಾ ಜಲಾಶಯ   

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಶನಿವಾರ ಮಳೆಯ ಆರ್ಭಟ ಮುಂದುವರಿದಿದೆ. ಭದ್ರಾ ಜಲಾಶಯದ ನೀರಿನಮಟ್ಟ 24 ಗಂಟೆಗಳಲ್ಲಿ 2 ಅಡಿ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ 29 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದೆ.

ಸಾಗರ, ಶಿಕಾರಿಪುರ, ಸೊರಬ, ಶಿವಮೊಗ್ಗ, ಭದ್ರಾವತಿ ತಾಲ್ಲೂಕಿನಲ್ಲಿ ಶುಕ್ರವಾರ ಬಿಡುವು ನೀಡಿದ್ದ ಮಳೆ ಶನಿವಾರ ಬೆಳಿಗ್ಗೆಯಿಂದಲೇ ಚುರುಕುಗೊಂಡಿದೆ.

ಹುಲಿಕಲ್‌ನಲ್ಲಿ 10.8 ಸೆಂ.ಮೀ, ಮಾಸ್ತಿಕಟ್ಟೆಯಲ್ಲಿ 10.3 ಸೆಂ.ಮೀ ಹಾಗೂ ಆಗುಂಬೆಯಲ್ಲಿ 7.2 ಸೆಂ.ಮೀ. ಮಳೆ ಸುರಿದಿದೆ. ತುಂಗಾ ಜಲಾಶಯದಿಂದ 33,069 ಹರಿಸಲಾಗುತ್ತಿದ್ದು, ನದಿ ತುಂಬಿ ಹರಿಯುತ್ತಿದೆ. ಪ್ರವಾಹದ ಮುನ್ನೆಚ್ಚರಿಕೆಯಾಗಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.