ADVERTISEMENT

ಶಿವಮೊಗ್ಗ | ಸಂಸದ ಬಿ.ವೈ.ರಾಘವೇಂದ್ರ ಕಾರು ಅಪಘಾತ: ಅಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 2:47 IST
Last Updated 22 ಜನವರಿ 2026, 2:47 IST
ಶಿವಮೊಗ್ಗ ಸಮೀಪದ ಕುಂಚೇನಹಳ್ಳಿ ಬಳಿ ಅಪಘಾತಕ್ಕೀಡಾದ ಸಂಸದ ಬಿ.ವೈ.ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು
ಶಿವಮೊಗ್ಗ ಸಮೀಪದ ಕುಂಚೇನಹಳ್ಳಿ ಬಳಿ ಅಪಘಾತಕ್ಕೀಡಾದ ಸಂಸದ ಬಿ.ವೈ.ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು   

ಶಿವಮೊಗ್ಗ: ತಾಲ್ಲೂಕಿನ ಕುಂಚೇನಹಳ್ಳಿ ಸಮೀಪ ಬುಧವಾರ ಮಧ್ಯಾಹ್ನ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರಯಾಣಿಸುತ್ತಿದ್ದ ಇನ್ನೋವ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ.

ಶಿಕಾರಿಪುರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಅವರ ಕಾರನ್ನು ಚಾಲಕ ಕುಂಚೇನಹಳ್ಳಿ ಬಳಿ ರಸ್ತೆಯ ಹಂಪ್ ದಾಟುವಾಗ ನಿಧಾನ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಕಾರು, ಚಾಲಕನ ನಿಯಂತ್ರಣ ತಪ್ಪಿ ಸಂಸದರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಮುಂದೆ ಸಾಗುತ್ತಿದ್ದ ಪೈಲಟ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರಿನ ಹಿಂಭಾಗ  ಹಾಗೂ ಮುಂಭಾಗ ಎರಡೂ ಕಡೆ ಹಾನಿಯಾಗಿದೆ. 

ನಂತರ ಬೆಂಗಾವಲು ವಾಹನದಲ್ಲಿ ರಾಘವೇಂದ್ರ ಅವರು ಶಿವಮೊಗ್ಗಕ್ಕೆ ಬಂದು, ಬೆಂಗಳೂರಿಗೆ ಹೋಗಲು ವಿಮಾನ ನಿಲ್ದಾಣಕ್ಕೆ ತೆರಳಿದರು ಎಂದು ತಿಳಿದುಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.