ಭದ್ರಾವತಿ: ಮಾಸ್ಕ್ ಹಾಕಿಕೊಳ್ಳಲು ಹೇಳಿದ್ದಕ್ಕೆ ನಗರಸಭೆ ಗುತ್ತಿಗೆ ನೌಕರ ಸುನಿಲ್ (24) ಅವರನ್ನು ಇರಿದು ಹತ್ಯೆ ಮಾಡಲಾಗಿದೆ.
ಗಾಯಗೊಂಡವರು ಶ್ರೀಕಂಠ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ: ಸುನಿಲ್ ಹಾಗೂ ಮತ್ತೊಬ್ಬ ಸಹೋದ್ಯೋಗಿ ಶ್ರೀಕಂಠ ಮಂಗಳವಾರ ಸಂಜೆ ಜತೆಯಾಗಿ ಅನ್ವರ್ ಕಾಲೊನಿ ಕಡೆಗೆ ತೆರಳಿದ್ದ ವೇಳೆ ಅಲ್ಲಿ ನಿಂತಿದ್ದ ಯುವಕರಿಗೆ ಮಾಸ್ಕ್ ಹಾಕಲು ಹೇಳಿದ್ದಾರೆ. ಈ ವಿಚಾರದಲ್ಲಿ ಪರಸ್ಪರ ಮಾತಿನ ಚಕಮಕಿ ನಡೆದು ಗುಂಪಿನಲ್ಲಿದ್ದ ಕೆಲವರು ಇವರ ಮೇಲೆ ಹಲ್ಲೆ ನಡೆಸಿ ಮಾರಾಕಾಸ್ತ್ರದಿಂದ ಇರಿದಿದ್ದಾರೆ.
ಇರಿತಕ್ಕೊಳಗಾದ ಇವರನ್ನು ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸುನಿಲ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.