ADVERTISEMENT

ಶಿಕಾರಿಪುರ: ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 7:27 IST
Last Updated 10 ಅಕ್ಟೋಬರ್ 2021, 7:27 IST

ಅಮಟೆಕೊಪ್ಪ (ಶಿಕಾರಿಪುರ): ಶಿಕಾರಿಪುರ ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ಸಮೀಪ ಶನಿವಾರ ಬೆಳಿಗ್ಗೆ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಕಪ್ಪನಹಳ್ಳಿ ಗ್ರಾಮದ (ಕ್ಯಾಂಪ್) ನಿವಾಸಿ ಹೇಮಾವತಿ (35) ಮೃತಪಟ್ಟವರು. ಅವರು ಸಂಡ ಗ್ರಾಮದ ಪಶು ಆಹಾರ ತಯಾರಿಕಾ ಘಟಕದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಪಶು ಆಹಾರ ತಯಾರಿಕಾ ಘಟಕಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಮದರಖಂಡಿ ಹಾಗೂ ಸಿಪಿಐ ಲಕ್ಷ್ಮಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

‘ಕಪ್ಪನಹಳ್ಳಿ ಗ್ರಾಮದ ಅನಿಲ್‌ ಕೊಲೆ ಮಾಡಿದ್ದು, ಕ್ರಮ ಕೈಗೊಳ್ಳಬೇಕು’ ಎಂದುಹೇಮಾವತಿ ಸಂಬಂಧಿ ನರಸಿಂಹ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.