ಶಿವಮೊಗ್ಗ: ಬಸವನಗುಡಿ ಬಡಾವಣೆಯಲ್ಲಿ ಸೋಮವಾರ ಹಾಡಹಗಲೇ ಯುವಕರ ಗುಂಪೊಂದು ರೌಡಿ ಶೀಟರ್ ಮಂಜುನಾಥ್ಭಂಡಾರಿ ಅವರನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದೆ.
ಮಧ್ಯಾಹ್ನ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಭಂಡಾರಿಯನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ಯೆಗೆ ಹಳೇ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.