ADVERTISEMENT

‘ಕಲಿಯುವ ಸೌಜನ್ಯದಿಂದ ಮನುಷ್ಯರಾಗಲು ಸಾಧ್ಯ‘

ಎನ್ಇಎಸ್ ಸಿಬ್ಬಂದಿಗೆ ‘ಆಡಳಿತ ನಿರ್ವಹಣೆ - ಕೌಶಲ್ಯತೆ ಕಾರ್ಯಾಗಾರ’

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 4:22 IST
Last Updated 29 ಅಕ್ಟೋಬರ್ 2025, 4:22 IST
ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಮಂಗಳವಾರ ಕಾರ್ಯಾಗಾರದ ಉದ್ಘಾಟನೆಯ ನೋಟ
ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಮಂಗಳವಾರ ಕಾರ್ಯಾಗಾರದ ಉದ್ಘಾಟನೆಯ ನೋಟ   

ಶಿವಮೊಗ್ಗ: ‘ಎಲ್ಲ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದೆ. ಹೊಸತನ ಹಾಗೂ ಕಲಿಯುವ ಸೌಜನ್ಯವನ್ನು  ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ’ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎಸ್.ಆರ್‌.ಎನ್.ಎಂ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿಗಾಗಿ ಮಂಗಳವಾರ ಏರ್ಪಡಿಸಿದ್ದ ‘ಆಡಳಿತ ನಿರ್ವಹಣೆ - ಕೌಶಲ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.

ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಏಕರೂಪವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಿಜವಾದ ಉನ್ನತಿಯಾಗುತ್ತದೆ. ಲೆಕ್ಕಾಚಾರವಿಲ್ಲದ ಬದುಕು ನಿರರ್ಥಕ ಎಂದು ಹೇಳಿದರು.

ADVERTISEMENT

‘ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ವಿದ್ಯಾಸಂಸ್ಥೆಯ ಎಲ್ಲ ಸಿಬ್ಬಂದಿ ಜವಾಬ್ದಾರರು. ಅಲ್ಲಿ ಅನುದಾನಿತ ಮತ್ತು ಅನುದಾನರಹಿತ ಎಂಬ ವ್ಯತ್ಯಾಸವಿಲ್ಲ. ಸರ್ಕಾರ ರೂಪಿಸಿರುವ ಶಿಕ್ಷಣ ಕಾಯ್ದೆಯನ್ನು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಧ್ಯಯನ ನಡೆಸಬೇಕು’ ಎಂದು ಕಾನೂನು ತಜ್ಞ ವೆಂಕಟೇಶರಾವ್ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಕಾರ್ಯದರ್ಶಿ ಪಿ.ನಾರಾಯಣ್, ನಿರ್ದೇಶಕರಾದ ಪಿ.ಮೈಲಾರಪ್ಪ, ಎಂ.ಎಸ್.ಅನಂತದತ್ತ, ಜಿ.ಎನ್.ಸುಧೀರ್, ಎಚ್.ಸಿ.ಶಿವಕುಮಾರ್, ಸೀತಾಲಕ್ಷ್ಮೀ, ಕುಲಸಚಿವ ಎನ್.ಕೆ.ಹರಿಯಪ್ಪ ಉಪಸ್ಥಿತರಿದ್ದರು. ಸಿ.ಎಂ.ನೃಪತುಂಗ ನಿರೂಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.