ಶಿವಮೊಗ್ಗ: ಕೊರೊನಾ ನಿರ್ಬಂಧಗಳ ಸಮಯದಲ್ಲಿ ಜನರಲ್ಲಿ ಜಾಗೃತಿ ಮೂಡಿಸದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಮಾನತು ಮಾಡಿದ್ದಾರೆ.
ಹನುಮಂತಪ್ಪ ಮಣ್ಣವಡ್ಡರ್ ಅಮಾತುಗೊಂಡವರು.
ಕೊರೊನಾ ನಿರ್ಬಂಧ ಜಾರಿಯಾದ ನಂತರ ಕೇಂದ್ರಸ್ಥಾನದಲ್ಲಿ ಇರದೆ, ಹಾಚೇರಿಯಿಂದ ನಿತ್ಯವೂ ಓಡಾಡುತ್ತಿದ್ದರು. ಸಮಯಕ್ಕೆ ಸರಿಯಾಗಿ ಬಾರದೇ ಸೂಕ್ಷ್ಮ ಸನ್ನಿವೇಶದಲ್ಲೂ ಕರ್ತವ್ಯ ಲೋಪ ಎಸಗಿದ್ದಾರೆ. ತಹಶೀಲ್ದಾರ್ ನೀಡಿದ ಸೂಚನೆಗಳನ್ನು ಪಾಲಿಸಿಲ್ಲ. ಹಾಗಾಗಿ, ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.