ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ನೂತನ ಅಧ್ಯಕ್ಷರಾಗಿ ಪವಿತ್ರಾ ರಾಮಯ್ಯ ನೇಮಕವಾಗಿದ್ದಾರೆ.
ತಾಲ್ಲೂಕಿನ ಮುತ್ತಿನಕೊಪ್ಪದ ಪವಿತ್ರಾ ರಾಮಯ್ಯ ರೈತ ಹೋರಾಟಗಾರ್ತಿ. ರೈತ ಪರ ಹೋರಾಟಗಳ ಜತೆ ಜನ ಸಾಮಾನ್ಯರ ಕಷ್ಟಗಳಿಗೂ ಧ್ವನಿಯಾದವರು. ಪತಿಯ ಗ್ರಾಮ ಕಾಚನಕಟ್ಟೆಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು, ಜೆಡಿಎಸ್ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ನಂತರ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.
ಬಿಜೆಪಿಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರಿಗೆ ರಾಜ್ಯ ಸರ್ಕಾರ ಕಾಡಾ ಜವಾಬ್ದಾರಿ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.