ADVERTISEMENT

ಪೇ ಸಿಎಂ ಪೋಸ್ಟರ್ ಕಾಂಗ್ರೆಸ್‌ನ ನೀಚ ಕೃತ್ಯ: ಕೆ.ಎಸ್.ಈಶ್ವರಪ್ಪ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕಾಂಗ್ರೆಸ್ ಚೇಲಾ; ಈಶ್ವರಪ್ಪ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 5:56 IST
Last Updated 24 ಸೆಪ್ಟೆಂಬರ್ 2022, 5:56 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಶಿವಮೊಗ್ಗ: ‘ಪೇ ಸಿಎಂ’ ಎಂದು ಪೋಸ್ಟರ್ ಅಂಟಿಸುವ ನೀಚಮಟ್ಟಕ್ಕೆ ಕಾಂಗ್ರೆಸ್ ಇಳಿಯ ಬಾರದಿತ್ತು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ನ ಚೇಲಾ. ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ
ಪತ್ರ ಬರೆದು ಆರೋಪ ಮಾಡಿದ್ದರು. ಆದರೆ, ಇಲ್ಲಿಯವರೆಗೆ ಶೇ 40ರಷ್ಟು ಕಮಿಷನ್ ಕೊಟ್ಟಿರುವ
ಬಗ್ಗೆ ಯಾವುದೇ ದಾಖಲೆ ಬಿಡುಗಡೆ ಮಾಡಿಲ್ಲ. ಸದ್ಯ ವಿಧಾನಸಭೆಗೆ ಚುನಾವಣೆ ನಡೆದರೆ ಕಾಂಗ್ರೆಸ್‌ನ ಮತ ಬ್ಯಾಂಕ್‌ನಲ್ಲಿ ಶೇ 40ರಷ್ಟು ಮತಗಳು ಕಡಿಮೆ ಆಗಲಿವೆ ಎಂದು ಕಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT