ADVERTISEMENT

ನೂತನ ಪಿಂಚಣಿ ಸಮಸ್ಯೆ ಬಗೆಹರಿಸಲು ಬಿಜೆಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 13:17 IST
Last Updated 2 ಏಪ್ರಿಲ್ 2019, 13:17 IST
ಆಯನೂರು ಮಂಜುನಾಥ್
ಆಯನೂರು ಮಂಜುನಾಥ್   

ಶಿವಮೊಗ್ಗ: ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುವ 5.5 ಲಕ್ಷ ನೌಕರ ಸಮಸ್ಯೆ ಬಗೆಹರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ದೂರಿದರು.

ಬೆಳಗಾವಿ ಅಧಿವೇಶನದಲ್ಲಿ ನೀಡಿದ್ದ ಭರವಸೆಯಂತೆ ಸಮಿತಿ ರಚನೆ ಮಾಡಿಲ್ಲ. ಇದುವರೆಗೂ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಇದು ರಾಜ್ಯ ಸರ್ಕಾರದ ಕಾರ್ಯವೈಖರಿ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ಬಾಕಿ ಇರುವ 3 ತಿಂಗಳ ಅತಿಥಿ ಉಪನ್ಯಾಸಕರ ವೇತನ ಕೂಡಲೇ ಪಾವತಿಸಬೇಕು. ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರು, ಶಿಕ್ಷಕ ವರ್ಗವನ್ನು ನಿರ್ಲಕ್ಷಿಸಿದೆ. ಹೀಗೆ ಮಾಡಿದರೆ ಅವರೆಲ್ಲ ಯುಗಾದಿ ಹಬ್ಬ ಮಾಡುವುದಾದರೂ ಹೇಗೆ? ಅತಿಥಿ ಉಪನ್ಯಾಸಕರಿಗೆ ₨ 25 ಸಾವಿರ ವೇತನ ನೀಡಬೇಕು ಎಂದು ಯುಜಿಸಿ ಸೂಚಿಸಿದ್ದರೂ ಬಹುತೇಕ ವಿಶ್ವವಿದ್ಯಾಲಯಗಳು ₨ 13 ಸಾವಿರ ನೀಡುತ್ತಿವೆ. ಈಗಲಾದರೂ ಅವರ ಸೇವೆ ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್, ಬಿಜೆಪಿ ಮುಖಂಡರಾದ ಎಸ್.ಜ್ಞಾನೇಶ್ವರ್, ಬಿಳಕಿ ಕೃಷ್ಣಮೂರ್ತಿ, ದೇವದಾಸ್ ನಾಯಕ್, ರತ್ನಾಕರ ಶೆಣೈ, ಮಧುಸೂದನ್, ಕೆ.ವಿ.ಅಣ್ಣಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.