ADVERTISEMENT

ಗ್ರಾಮ ಠಾಣಾ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 18:45 IST
Last Updated 16 ಅಕ್ಟೋಬರ್ 2019, 18:45 IST

ಶಿವಮೊಗ್ಗ: ಗ್ರಾಮ ಠಾಣಾಗಳಲ್ಲಿ ವಾಸದ ಮನೆ, ಕೊಟ್ಟಿಗೆ ನಿರ್ಮಿಸಿಕೊಂಡಿರುವ ಜನರಿಗೆ ಹಕ್ಕುಪತ್ರ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಗ್ರಹಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಗ್ರಾಮ ಠಾಣಾ ಪ್ರದೇಶಗಳಲ್ಲಿ (ಗೋ ಠಾಣ) ಅನಧಿಕೃತವಾಗಿ ಲಕ್ಷಾಂತರ ಜನರು ಮನೆ, ಕೊಟ್ಟಿಗೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ. ಇದುವರೆಗೂ ಅವರಿಗೆ ಹಕ್ಕುಪತ್ರ ಸಿಕ್ಕಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಹಿಂದೆ ಭೂಕಂದಾಯ ಅಧಿನಿಯಮಕ್ಕೆ ತಿದ್ದುಪಡಿ ತಂದು ನಮೂನೆ- 94ಸಿ ಜಾರಿ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಭೂ ಕಂದಾಯ ಅಧಿನಿಯಮಕ್ಕೆ ತಿದ್ದುಪಡಿ ತರಬೇಕು. ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಅಲೆದಾಡುವ ಪದ್ಧತಿಗೆ ತಿಲಾಂಜಲಿ ನೀಡಬೇಕು. ಸರಳ ಮಾರ್ಗ ಅನುಸರಿಸಲು ಸೂಚಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ ಮುಖಂಡರಾದ ಜಿ.ಮಾದಪ್ಪ, ಹೊಳೆಮಡಿಲು ವೆಂಕಟೇಶ್, ಹೊನ್ನಮ್ಮ ಮಾಲತೇಶ್, ಎಚ್.ಎಂ.ಸಂಗಯ್ಯ, ಹೇಮಂತಕುಮಾರ್, ಆದಿಶೇಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.