ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆಸೇವಾ ಭದ್ರತೆಒದಗಿಸುವ ವಿಷಯಸಂಪುಟ ಸಮಿತಿಮುಂದೆ ತರಬೇಕು ಎಂದುಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷಡಾ.ಎಚ್. ಸೋಮಶೇಖರ ಶಿಮೊಗ್ಗಿ ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಒದಗಿಸುವ ಕುರಿತುಸದನದಲ್ಲಿ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ. ಇದರಿಂದ ಸಾ ನಿರಾಶೆಯಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿಬೇಸರ ವ್ಯಕ್ತಪಡಿಸಿದರು.
ಲಾಕ್ಡೌನ್ ಅವಧಿ ವೇತನ ನೀಡುವಂತೆ 11 ವಾರಗಳಿಂದ ರಾಜ್ಯದ ಎಲ್ಲೆಡೆ ಮುಷ್ಕರ ನಡೆಸಲಾಗುತ್ತಿದೆ.ಈ ಬಾರಿಯ ಅಧಿವೇಶನದಲ್ಲಿ ಬಾಕಿ ವೇತನ ಕೊಡಿಸುವವಿಷಯ ಚರ್ಚೆಯಾಗಿದೆ.ಸೇವಾ ಭದ್ರತೆ ವಿಚಾರ ಚರ್ಚೆಯಾಗಲೇ ಇಲ್ಲ ಎಂದುದೂರಿದರು.
ಪದವೀಧರರ ಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು ನಮ್ಮ ಪರ ನಿಲ್ಲಲಿಲ್ಲ.ಅತಿಥಿ ಉಪನ್ಯಾಸಕರ ಹಿತ ಕಾಪಾಡುವಲ್ಲಿ ಹಿಂದೆ ಸರಿದಿದ್ದಾರೆ.ಕೋವಿಡ್ ಕಾರಣಕ್ಕೆ ಈ ಬಾರಿ ಕಾಲೇಜುಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ತರಗತಿ ಆರಂಭ ಅಸ್ಪಷ್ಟವಾಗಿದೆ. ವಿಶ್ವವಿದ್ಯಾಲಯದಲ್ಲಿಆನ್ಲೈನ್ ತರಗತಿಗೆ ಅತಿಥಿ ಉಪನ್ಯಾಸಕರನ್ನು ಬಳಸಿ ಕೊಳ್ಳಲಾಗಿದೆ. ಆದರೆ, ಕಾಲೇಜು ಶಿಕ್ಷಣ ಇಲಾಖೆ ಅತಿಥಿ 2020-21ನೇ ಸಾಲಿಗೆ ನೇಮಕವೇ ಮಾಡಿಕೊಂಡಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಮಧ್ಯ ಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಂ.ಸಿ.ನರಹರಿ, ಡಿಎಸ್ಎಸ್ ಮುಖಂಡ ಎಚ್.ಟಿ.ಹಾಲೇಶಪ್ಪ, ಎಂ.ಆರ್.ಶಿವಕುಮಾರ್ ಅಸ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.