ADVERTISEMENT

ನ್ಯಾಯ ಬೆಲೆ ಅಂಗಡಿ ಅಮಾನತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 13:42 IST
Last Updated 17 ಜುಲೈ 2020, 13:42 IST
ಶಿವಮೊಗ್ಗದಲ್ಲಿ ಶುಕ್ರವಾರ ಹಕ್ಕಿಪಿಕ್ಕಿ ಕ್ಯಾಂಪ್‌ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಹಕ್ಕಿಪಿಕ್ಕಿ ಕ್ಯಾಂಪ್‌ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಸಮರ್ಪಕವಾಗಿ ಪಡಿತರ ವಿತರಿಸದ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು ಮಾಡಬೇಕು ಎಂದು ಆಗ್ರಹಿಸಿಹಿರಿಯ ಕಾಂಗ್ರೆಸ್ ಮುಖಂಡ ಎಂ.ಎಸ್.ಸಿದ್ದಪ್ಪ ನೇತೃತ್ವದಲ್ಲಿ ಹಕ್ಕಿಪಿಕ್ಕಿ ಕ್ಯಾಂಪ್‌ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತೂಕದ ಅಳತೆ ಸರಿಇಲ್ಲ.ನಿಗದಿತ ಆಹಾರ ಧನ್ಯಾ ವಿತರಿಸುವುದಿಲ್ಲ. ಪ್ರಶ್ನಿಸುವವರ ವಿರುದ್ಧದಬ್ಬಾಳಿಕೆ ನಡೆಸುತ್ತಾರೆ ಎಂದು ದೂರಿದರು.

ಹಕ್ಕಿಪಿಕ್ಕಿ ಕ್ಯಾಂಪ್‌ನ ಏಕಾಶಿ, ಮಾರುತಿಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.