ADVERTISEMENT

ಸೂಕ್ತ ಪರಿಹಾರ ನೀಡಲು ಸಿದ್ಲಿಪುರ ಗ್ರಾಮಸ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 10:47 IST
Last Updated 2 ಜುಲೈ 2019, 10:47 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪರಿಹಾರಕ್ಕೆ ಒತ್ತಾಯಿಸಿ ಸಿದ್ಲಿಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪರಿಹಾರಕ್ಕೆ ಒತ್ತಾಯಿಸಿ ಸಿದ್ಲಿಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಪರಿಹಾರ, ನಿವೇಶನ ನೀಡಲು ಒತ್ತಾಯಿಸಿ ಸಿದ್ಲಿಪುರ, ದೇವಕಾತಿಕೊಪ್ಪ ರೈತ ಒಕ್ಕೂಟದ ಸದಸ್ಯರು ಮಂಗಳವಾರಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಿದ್ಲಿಪುರ ಗ್ರಾಮದ ಸರ್ವೆ ನಂಬರ್ 6ಮತ್ತು 28ರಲ್ಲಿ 40 ವರ್ಷಗಳಿಂದ ಪರಿಶಿಷ್ಟ ಜಾರಿಗೆ ಸೇರಿದ 33 ಬಡ ರೈತರು ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. 2012ರಿಂದಲೂ ಭೂಮಿಯ ಪರಿಹಾರಕ್ಕಾಗಿ ಹಲವು ಬಾರಿ ಪ್ರಯತ್ನಿಸಿದರೂ ಪರಿಣನೆಗೆ ತೆಗೆದುಕೊಳ್ಳುತ್ತಿಲ್ಲ. ಬಗರ್‌ಹುಕುಂ ರೈತರಿಗೆ ಪರಿಹಾರ ಹಾಗೂ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ಹಿಂದೆ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ರೈತರ ಭೂಮಿಗೆ ಹಣ ನಿಗದಿ ಮಾಡುವಾಗ ಎಕರೆಗೆ ₨ 30ಲಕ್ಷ, ಖುಷ್ಕಿ ಜಮೀನಿಗೆ ₨ 14 ಲಕ್ಷ, ತರಿ ಜಮೀನಿಗೆ ₨ 15 ಲಕ್ಷ ಎಂದು ನಿರ್ಧರಿಸಲಾಗಿದೆ ಎಂದು ನೆನಪಿಸಿದರು.

ADVERTISEMENT

ಭೂಮಿ ಕಳೆದುಕೊಂಡ ರೈತರ ಕುಟುಂಬಗಳಿಗೆ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ನೀಡಬೇಕು. ಪ್ರತಿ ಕುಟುಂಬಕ್ಕೂ ಕನಿಷ್ಠ 40X60 ಅಳತೆಯ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಅಧ್ಯಕ್ಷ ಎಸ್.ಎಂ.ಲೋಕೇಶಪ್ಪ, ಧನಂಜಯ, ದೀಪಕ್‌ ನಾಯಕ್, ಗುಂಡೂರಾವ್, ಮಾರಭೋವಿ, ನಂದೀಶಪ್ಪ ಪ್ರತಿಭಟನೆನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.