ADVERTISEMENT

ರಸ್ತೆ, ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 16:10 IST
Last Updated 5 ಆಗಸ್ಟ್ 2019, 16:10 IST
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ರಸ್ತೆ, ರೈಲ್ವೆಸೇತುವೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರದ 100 ಅಡಿ ರಸ್ತೆಯನ್ನು ರೈಲ್ವೆ ನಿಲ್ದಾಣದ ಸಮೀಪ ಇರುವ ಸರ್ವಜ್ಞ ವೃತ್ತಕ್ಕೆ ಕೂಡಿಸಬೇಕು. ವಿದ್ಯಾನಗರ ಹೊಳೆಹೊನ್ನೂರು ರಸ್ತೆಯಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಅಗತ್ಯ ಇರುವ ಭಾಗಗಳಲ್ಲಿ ರಸ್ತೆ ನಿರ್ಮಿಸಬೇಕು. ಹಾಳಾಗಿರುವ ರಸ್ತೆಗಳನ್ನು ದುರಸ್ತಿ ಮಾಡಬೇಕು. ರೈಲು ಮಾರ್ಗ ಹಾದು ಹೋಗಿರುವ ನಗರದ ಕೆಲವು ಭಾಗಗಳಲ್ಲಿ ಮೇಲು ಅಥವಾ ಕೇಳ ಸೇತುವೆ ನಿರ್ಮಿಸಬೇಕು. ಈ ಸಂಬಂಧ ರೈಲ್ವೆ ವಿಭಾಗ ಅಧಿಕಾರಿಗಳ ಜತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಒಕ್ಕೂಟದ ಮುಖಂಡರಾದ ಕೆ.ವಿ.ವಸಂತಕುಮಾರ್, ಜ್ಯೋತಿ ಪ್ರಕಾಶ್, ಅಶೋಕ್ ಯಾದವ್, ಚಿಕ್ಕಸ್ವಾಮಿ, ರಮೇಶ್ ಯಾದವ್ಪ್ರತಿಭಟನೆಯ ನೇತೃತ್ವ ಬಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.