ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 13:06 IST
Last Updated 13 ಡಿಸೆಂಬರ್ 2019, 13:06 IST
ಶಿವಮೊಗ್ಗದಲ್ಲಿ ಶುಕ್ರವಾರ ಮುತ್ತಹಿದ ಮಹಾಝ್ ಸಂಘಟನೆ ಸದಸ್ಯರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಮುತ್ತಹಿದ ಮಹಾಝ್ ಸಂಘಟನೆ ಸದಸ್ಯರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ:ಕೇಂದ್ರ ಸರ್ಕಾರಜಾರಿಗೆ ತಂದಿರುವ ನೂತನಪೌರತ್ವ ಕಾಯ್ದೆವಿರೋಧಿಸಿ ಮುತ್ತಹಿದ ಮಹಾಝ್ ಸಂಘಟನೆ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ, ರಾಷ್ಟ್ರಪತಿ ಅಂಕಿತ ಹಾಕಿರುವ ಈಕಾಯ್ದೆ ಸಂವಿಧಾನದ ಆಶಯದ ವಿರುದ್ಧವಾಗಿದೆ. ದೇಶದ ನೈತಿಕ, ಸಂವಿಧಾನಿಕ, ಜಾತ್ಯತೀತ ಪರಂಪರೆಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕಾಯ್ದೆಯ ಹಿಂದೆ ಕೋಮು ಧ್ರುವೀಕರಣ ಮತ್ತು ಮುಸ್ಲಿಮರನ್ನು ಬಲಿಪಶುಗಳನ್ನಾಗಿಸುವ ಹುನ್ನಾರಅಡಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶವೂ ಅಡಗಿದೆ. ದೇಶದ ಆರ್ಥಿಕ ಹಾಗೂ ರಾಜಕೀಯ ಪರಿಸ್ಥಿತಿ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದುಆರೋಪಿಸಿದರು.

ADVERTISEMENT

ಸಂಘಟನೆಯ ಮುಖಂಡರಾದ ಪರ್ವೀಜ್ ಅಹಮದ್, ಎಚ್.ಕೆ.ಅಬ್ದುಲ್ ವಾಜೀದ್, ಹಾಮೀದ್ ಮತ್ತು ಇಕ್ಬಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.