ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ಡಿ.19ರಂದುಬೆಳಿಗ್ಗೆ 10ಕ್ಕೆಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.
ಅಂದುಪಕ್ಷದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟು ಗೋಪಿವೃತ್ತ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ.ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಆರ್.ಪ್ರಸನ್ನಕುಮಾರ್, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕೇಂದ್ರಸರ್ಕಾರಅಂಗೀಕರಿಸಿದ ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನಕ್ಕೆ,ಒಂದು ಸಮುದಾಯದ ಆಶಯಕ್ಕೆ ವ್ಯತಿರಿಕ್ತವಾಗಿದೆ.
ಕೋಮು ಧ್ರುವೀಕರಣ ಮತ್ತು ಒಂದು ಸಮುದಾಯ ಬಲಿಪಶುವಾಗಿಸುವಹುನ್ನಾರಅಡಗಿದೆ.ಇದರ ಹಿಂದೆ ರಾಜಕೀಯ ದುರುದ್ದೇಶವಿದೆ. ಸಂವಿಧಾನ ದಮನಕ್ಕಾಗಿಕೇಂದ್ರಸರ್ಕಾರ ಇಂತಹದಾಳಿ ಆರಂಭಿಸಿದೆ ಎಂದು ಆರೋಪಿಸಿದರು.
ಮಸೂದೆ ವಿರೋಧಿಸಿ ದೇಶದ ಎಲ್ಲಡೆ ಶಾಂತಿಯುತ ಪ್ರತಿಭಟನೆ ನಡೆಯುತ್ತಿದೆ. ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.ಇದಕ್ಕೆ ಕಾಂಗ್ರೆಸ್ ಕಾರಣ ಎಂದು ಕೇಂದ್ರಸರ್ಕಾರ ಮಾಡುತ್ತಿರುವ ಆರೋಪಖಂಡನೀಯ. ಹಿಂಸಾಚಾರಕ್ಕೆ ನರೇಂದ್ರ ಮೋದಿ, ಅಮಿತ್ ಶಾ ಅವರೇ ಕಾರಣ ಎಂದರು.
ಡಿ.19ರಂದು ಪ್ರತಿಭಟನಾ ಮೆರವಣಿಗೆ ನಡೆಸದಂತೆ ಒತ್ತಡ ಹೇರಲಾಗುತ್ತಿದೆ. ಇದು ಪ್ರಜಾಪ್ರಭುತ್ವ ಹತ್ತಿಕ್ಕುವ ಪ್ರಯತ್ನ. ಎಷ್ಟೆ ಒತ್ತಡ ತಂದರೂ ಅಂದು ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಎಚ್.ಎಂ.ಚಂದ್ರಶೇಖರಪ್ಪ, ಮುಖಂಡರಾದ ಎಲ್.ರಾಮೇಗೌಡ, ಮುಕ್ತಿಯಾರ್ ಅಹಮ್ಮದ್, ಉಸ್ಮಾನ್, ಪಂಡಿತ್ ವಿ. ವಿಶ್ವನಾಥ್, ನಾಗರಾಜ್, ಯಮುನಾ ರಂಗೇಗೌಡಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.