ಶಿವಮೊಗ್ಗ: ಧರ್ಮದ ಆಧಾರದಲ್ಲಿ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದಪೌರತ್ವನೀಡುವಮಸೂದೆ ವಿರೋಧಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಭಾರತದ ಸಂವಿಧಾನದ ಮೇಲೆ ಕೋಮುವಾದದ ಪ್ರಹಾರ ನಡೆಸುವ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರಬಾರದು. ದೇಶದ ಮುಸ್ಲಿಮರನ್ನೇಗುರಿಯಾಗಿಸಿಕೊಂಡ ಈ ಮಸೂದೆಯಲ್ಲಿ ಧರ್ಮದ ಆಧಾರದ ಮೇಲೆ ದೇಶ ಹೊಡೆಯುವ ತಂತ್ರ ಅಡಗಿದೆ ಎಂದು ಆರೋಪಿಸಿದರು.
ಆಫ್ಘಾನಿಸ್ತಾನ, ಪಾಕಿಸ್ತಾನ,ಬಾಂಗ್ಲಾದೇಶಗಳಲ್ಲಿ ಧಾರ್ಮಿಕ ಶೋಷಣೆಗೆ ಒಳಗಾಗಿಭಾರತಕ್ಕೆ ಬಂದ ಹಿಂದೂ, ಜೈನ, ಬೌದ್ದ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಸಮುದಾಯದವರು ಭಾರತದಲ್ಲಿ 6 ವರ್ಷಗಳಿಂದ ನೆಲೆಸಿದ್ದರೆ ಅಂಥವರುಭಾರತದ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು. ದೇಶದ ಮುಸ್ಲಿಮರನ್ನೇ ಗುರಿಯಾಗಿಸಿಕೊಂಡು ಮಸೂದೆ ರೂಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ ಮೂಲತತ್ವಕ್ಕೆವಿರುದ್ಧವಾಗಿದೆ.ದಶಕಗಳಿಂದ ಭಾರತದಲ್ಲಿ ನೆಲೆಸಿದ್ದರೂ ಒಂದು ಧರ್ಮಕ್ಕೆ ಸೇರಿದವರು ಭಾರತೀಯ ಪೌರತ್ವ ಪಡೆಯುವಲ್ಲಿ ವಂಚಿತರಾಗುತ್ತಾರೆ. ಇಂತಹಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.