ADVERTISEMENT

ಶಂಕರಚಾರ್ಯ ಪ್ರತಿಮೆಗೆ ಅವಮಾನ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 10:35 IST
Last Updated 14 ಆಗಸ್ಟ್ 2020, 10:35 IST
ಶಿವಮೊಗ್ಗದಲ್ಲಿ ಶುಕ್ರವಾರ ವಿಪ್ರ ಯುವ ಪರಿಷತ್ ಕಾರ್ಯಕರ್ತರು ಶೃಂಗೇರಿ ವೃತ್ತದ ಆದಿಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್‌ಡಿಪಿಐ ಬಾವುಟ ಹಾರಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಶುಕ್ರವಾರ ವಿಪ್ರ ಯುವ ಪರಿಷತ್ ಕಾರ್ಯಕರ್ತರು ಶೃಂಗೇರಿ ವೃತ್ತದ ಆದಿಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್‌ಡಿಪಿಐ ಬಾವುಟ ಹಾರಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಶೃಂಗೇರಿ ವೃತ್ತದ ಆದಿಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್‌ಡಿಪಿಐ ಬಾವುಟ ಹಾರಿಸಿರುವುದನ್ನು ಖಂಡಿಸಿ ವಿಪ್ರ ಯುವ ಪರಿಷತ್ಕಾರ್ಯಕರ್ತರುಶುಕ್ರವಾರಜಿಲ್ಲಾಧಿಕಾರಿಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಶೃಂಗೇರಿಯಲ್ಲಿ ಬಾವುಟ ಹಾರಿಸುವ ಮೂಲಕ ಸಮಾಜದಶಾಂತಿಗೆ ಭಂಗ ತರುವಯತ್ನ ನಡೆದಿದೆ. ಅಂಥವರವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಗೆ ಕಾರಣವಾದ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಪರಿಷತ್‌ ಅಧ್ಯಕ್ಷ ಕೆ.ವಿ.ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಆರ್.ಸಂತೋಷ್ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.