ADVERTISEMENT

ಬೆಲೆ ಏರಿಕೆ ನಿಯಂತ್ರಣಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 12:18 IST
Last Updated 6 ಜುಲೈ 2021, 12:18 IST
ಶಿವಮೊಗ್ಗದಲ್ಲಿ ಮಂಗಳವಾರ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಪದಾಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಮಂಗಳವಾರ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಪದಾಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್‌ ಬೆಳೆಗಳು ಗಗನಕ್ಕೇರಿವೆ. ಖಾಸಗಿ ಬಸ್ ಪ್ರಯಾಣ ದರ, ವಿದ್ಯುತ್ ದರ ಹೆಚ್ಚಳ ಸಾಮಾನ್ಯರ ಬದುಕಿಗೆ ಮಾರಕವಾಗಿದೆ. ಜೀವನ ನಡೆಸುವುದೆ ಕಷ್ಟವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಜನ ವಿರೋಧಿ ಸರ್ಕಾರಗಳನ್ನು ವಜಾಗೊಳಿಸಬೇಕು ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕೋವಿಡ್ ನಿಯಂತ್ರಿಸುವಲ್ಲೂ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಾರಂಭದಲ್ಲೇ ಹೊರ ದೇಶಗಳಿಗೆ ಲಸಿಕೆ ಕಳುಹಿಸಲಾಯಿತು. ದುಡಿಯುವ ಕೈಗಳಿಗೆ ಲಾಕ್‌ಡೌನ್‌ನಿಂದ ಕೆಲಸವಿಲ್ಲದಂತಾಗಿದೆ. ಜೀವನ ನಡೆಸುವುದೇ ದುಸ್ತರವಾಗಿದೆ. ಈಗ ಬೆಲೆ ಏರಿಕೆ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಟ್ರಸ್ಟ್‌ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್,ಪದಾಧಿಕಾರಿಗಳಾದ ಹೊಳೆಮಡಿಲು ವೆಂಕಟೇಶ್, ಎಚ್.ಎಂ.ಸಂಗಯ್ಯ, ಎಸ್.ವಿ.ರಾಜಮ್ಮ, ಶಂಕ್ರಾನಾಯ್ಕ, ಗೋಪಾಲಕೃಷ್ಣ, ಆದಿಶೇಷ, ಶ್ರೀಧರ್‌ ಅವರು ರಾಷ್ಟ್ರಪತಿಗೆ ಕಳುಹಿಸುವಂತೆ ಕೋರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.