ADVERTISEMENT

ಗಾಂಜಾ ಮಾರಾಟ: ಆರೋಪಿಗಳ ಬಂಧನಕ್ಕೆ ಹೋದ ಪಿಎಸ್‌ಐ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 15:32 IST
Last Updated 12 ಆಗಸ್ಟ್ 2020, 15:32 IST

ಶಿವಮೊಗ್ಗ:ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ವೇಳೆ ಕುಂಸಿ ಪೊಲೀಸ್ ಠಾಣೆ ಪಿಎಸ್ಐನವೀನ್ ಮಠಪತಿ ಹಾಗೂಹೆಡ್ ಕಾನ್‌ಸ್ಟೆಬಲ್ ಬಸವಂತಪ್ಪ ಮೇಲೆ ಆರೋಪಿಗಳು ಹಲ್ಲೆ ನಡೆಸಿ,ಪರಾರಿಯಾಗಿದ್ದಾರೆ.

ಪಿಎಸ್ಐ ನವೀನ್ ಮಠಪತಿ ತಲೆಗೆ ಗಾಯವಾಗಿದೆ. ಬಸವಂತಪ್ಪ ಅವರ ಕೈಗೆ ಹೊಡೆತ ಬಿದ್ದಿದ್ದು, ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡು ದಿನಗಳ ಹಿಂದೆ ಪಿಎಸ್‌ಐ 300 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಮಂಡಘಟ್ಟ ಗ್ರಾಮದ ಮಧು ಹಾಗೂ ಮನು ಅವರನ್ನು ಬಂಧಿಸಲು ಗ್ರಾಮಕ್ಕೆ ಹೋದಾಗ ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ADVERTISEMENT

ಪಿಎಸ್ಐ ಮಠಪತಿ ನೀಡಿದ ದೂರಿನ ಮೇಲೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಸಿಪಿಐಗೆ ಪ್ರಕರಣದ ತನಿಖೆ ವಹಿಸಲಾಗಿದೆ ಎಂದು ಎಸ್ಪಿ ಶಾಂತರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.