ಶಿವಮೊಗ್ಗ: ಕೋವಿಡ್ನಿಂದ ಬಳಲುತ್ತಿದ್ದ ಭದ್ರಾವತಿ ಸಂಚಾರ ಠಾಣೆ ಪಿಎಸ್ಐ ಕೆ.ಬಿ.ರಮೇಶ್ ಶುಕ್ರವಾರ ನಿಧನರಾದರು.
ಕರ್ತವ್ಯದಲ್ಲಿದ್ದಾಗಲೇ ಮೇ 14ರಂದು ಅವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಮನೆಯಲ್ಲೇ ಐಸೋಲೇಷನ್ನಲ್ಲಿದ್ದರು. ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಾಗರ ತಾಲ್ಲೂಕು ಬಾಳೆಗುಂಡಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.