ADVERTISEMENT

ಪಿಎಸ್‌ಐ ಮೀರಾಬಾಯಿ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಮೇ 2020, 15:07 IST
Last Updated 21 ಮೇ 2020, 15:07 IST

ಶಿವಮೊಗ್ಗ:ಸಾಮಾಜಿಕ ಜಾಲತಾಣಗಳಲ್ಲಿಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿರುವ ಸಾಗರ ಗ್ರಾಮಾಂತರ ಠಾಣೆ ಪಿಎಸ್‌ಐ ಮೀರಾಬಾಯಿ ವಿರುದ್ಧ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್.ಸುಂದರೇಶ್ ಗುರುವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯಅವರು ಭಾಷಣ ಮಾಡುತ್ತಿರುವ ಚಿತ್ರ ಹಾಕಿ ‘ವಿಶ್ವಕ್ಕೆ ಗೊತ್ತಿರುವ ಕಟು ಸತ್ಯ ಏನು ಅಂದ್ರೆ ಕೊರೊನಾ ಹರಡುವುದು ಕೈಯಿಂದ ಹೊರತು ಕಮಲದ ಹೂವಿನಿಂದ ಅಲ್ಲ’ ಎಂದು ವಾಟ್ಸ್‌ಆ್ಯಪ್ ಸ್ಟೇಟಸ್‌ ಹಾಕಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇಂತಹ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕು. ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT