ADVERTISEMENT

ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದ ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 20:15 IST
Last Updated 24 ಏಪ್ರಿಲ್ 2019, 20:15 IST
ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ಹಿನ್ನೆಲೆಯಲ್ಲಿ ಶಿಕಾರಿಪುರದ ತಮ್ಮ ನಿವಾಸದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಮ್ಮ ತಂದೆ ಬಿ.ಎಸ್‌. ಯಡಿಯೂರಪ್ಪ ಹಾಗೂ ಪತ್ನಿ ತೇಜಸ್ವಿನಿಯೊಂದಿಗೆ ಕಾಲ ಕಳೆದ ದೃಶ್ಯ.
ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ಹಿನ್ನೆಲೆಯಲ್ಲಿ ಶಿಕಾರಿಪುರದ ತಮ್ಮ ನಿವಾಸದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಮ್ಮ ತಂದೆ ಬಿ.ಎಸ್‌. ಯಡಿಯೂರಪ್ಪ ಹಾಗೂ ಪತ್ನಿ ತೇಜಸ್ವಿನಿಯೊಂದಿಗೆ ಕಾಲ ಕಳೆದ ದೃಶ್ಯ.   

ಶಿಕಾರಿಪುರ: ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿಯುವವರೆಗೂ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಬುಧವಾರ ತಮ್ಮ ನಿವಾಸದಲ್ಲಿ ತಂದೆ ಬಿ.ಎಸ್‌.ಯಡಿಯೂರಪ್ಪ ಹಾಗೂ ಪತ್ನಿ ತೇಜಸ್ವಿನಿ ಸೇರಿ ಇತರೆ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಕಾಲ ಕಳೆದರು.

ಮುಂಜಾನೆ ತಂದೆ ಬಿ.ಎಸ್‌. ಯಡಿಯೂರಪ್ಪ ಜತೆ ಚನ್ನಳ್ಳಿ ಗ್ರಾಮ ಸಮೀಪವಿರುವ ತಮ್ಮ ತೋಟಕ್ಕೆ ತೆರಳಿ ವಾಯುವಿಹಾರ ನಡೆಸಿದರು. ನಂತರ ಕುಟುಂಬ ಸದಸ್ಯರೊಂದಿಗೆ ಬೆಳಿಗ್ಗೆ ಉಪಹಾರ ಸ್ವೀಕರಿಸಿ ಸ್ವಲ್ಪ ಸಮಯ ವಿಶ್ರಾಂತಿ ಪಡೆದರು. ಕೆಲ ನಿಮಿಷ ತಂದೆ ಯಡಿಯೂರಪ್ಪ ಜತೆ ಚರ್ಚೆ ನಡೆಸಿದರು. ನಂತರ ತಮ್ಮ ನಿವಾಸಕ್ಕೆ ಬಂದಿದ್ದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಲಕ್ಷಾಂತರ ಮತಗಳ ಅಂತರದಿಂದ ಗೆಲುವು ಸಾಧಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಮಧ್ಯಾಹ್ನ ಊಟ ಸೇವಿಸಿದ ನಂತರ ಬಿ.ಎಸ್‌. ಯಡಿಯೂರಪ್ಪ ಜತೆ ಬಿ.ವೈ. ರಾಘವೇಂದ್ರ ಶಿವಮೊಗ್ಗ ನಗರಕ್ಕೆ ಪ್ರಯಾಣ ಬೆಳೆಸಿದರು.

ADVERTISEMENT

ಸಂಜೆ ಶಿವಮೊಗ್ಗದಲ್ಲಿ ಬಿಜೆಪಿ ಪ್ರಮುಖರ ಜೊತೆ ಸಭೆ ನಡೆಸಿ ರಾತ್ರಿ ಶಿಕಾರಿಪುರಕ್ಕೆ ವಾಪಸ್‌ ಆಗಿ ವಾಸ್ತವ್ಯ ಹೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.