ADVERTISEMENT

ಶಿವಮೊಗ್ಗ: ತುಂಗಾ ನದಿಯಲ್ಲಿ ತೇಲಿದ ಶವ, ವಿದ್ಯುತ್‌ ತಂತಿ ತುಳಿದು ರೈತ ಸಾವು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 9:56 IST
Last Updated 7 ಆಗಸ್ಟ್ 2019, 9:56 IST
   

ಶಿವಮೊಗ್ಗ:ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಸಾವು ನೋವಿನ ಸುದ್ದಿಗಳು ಕೇಳಿಬರುತ್ತಿದ್ದು, ಶಿವಮೊಗ್ಗದ ತುಂಗಾ ನದಿಯಲ್ಲಿ ಶವವೊಂದು ತೇಲಿಬಂದಿದ್ದು ನದಿ ನೋಡಲು ಬಂದವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಮೃತರ ಬಗ್ಗೆ ಇನ್ನೂ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಾಕ ಸೇವೆಯ ಸಿಬ್ಬಂದಿ ಶವದ ಹುಡುಕಾಟದಲ್ಲಿದ್ದಾರೆ.

ಶಿಕಾರಿಪುರದ ಚಿಕ್ಕಮಾಗಡಿ ಗ್ರಾಮದಲ್ಲಿ ತೋಟದಲ್ಲಿ ನೀರು ನಿಂತ ಕಾರಣ ಅದನ್ನ ನೋಡಿಕೊಂಡು ಬರಲೆಂದು ತೆರಳಿದ್ದ ರೈತ ಲೋಕೇಶ್(45) ವಿದ್ಯುತ್ ಶಾಕ್‌ನಿಂದಾಗಿ ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ, ಜಮೀನಿನ ನೀರಿನೊಂದಿಗೆ ತಂತಿ ತಗುಲಿದೆ.

ADVERTISEMENT

ಸಾಗರದ ಆನಂದಪುರದಿಂದ ಕೊರ್ಲಿಕೊಪ್ಪಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಯೋಗೇಂದ್ರ (45) ಅವರ ಮೇಲೆ ಮರವೊಂದು ಬಿದ್ದಿದೆ. ಮರಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.