ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಲ್ಲಿ ಶನಿವಾರವೂ ಮಳೆಯ ಆರ್ಭಟ ಮುಂದುವರಿದಿದೆ.
ಸತತ ಮಳೆಯ ಪರಿಣಾಮ ಈ ಎರಡೂ ತಾಲ್ಲೂಕುಗಳ ಜನರು ಇಡೀ ದಿನ ಮನೆ ಬಿಟ್ಟು ಹೊರಗೆ ಬರಲು ಸಾಧ್ಯವಾಗಿಲ್ಲ. ಜಲಾಶಯಗಳ ಒಳ ಹರಿವು ಕಡಿಮೆಯಾದರೂ, ನದಿಗಳ ನೀರಿನ ಮಟ್ಟ ಕಡಿಮೆಯಾಗಿಲ್ಲ. ಸಾಗರ, ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ ತಾಲ್ಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.