ಹೊಸನಗರ: ತಾಲ್ಲೂಕಿನ ನಗರ ಹೋಬಳಿಯಲ್ಲಿ ಸೋಮವಾರ ವ್ಯಾಪಕ ಮಳೆಯಾಗುತ್ತಿದ್ದು, ರಸ್ತೆ ಮೇಲೆ ಬೃಹತ್ ಗಾತ್ರದ ಬಂಡೆ ಉರುಳಿದೆ. ಪರಿಣಾಮ ಹಿಲ್ಕುಂಜಿ ಸುಳುಗೋಡು ಸಂಪರ್ಕ ಕಡಿತಗೊಂಡಿದೆ.
ಆಗರಬೈಲು, ಸುಳುಗೋಡು, ಹೆಂಡೆಗದ್ದೆ ಗ್ರಾಮದ ಸಂಪರ್ಕ ರಸ್ತೆ ಇದಾಗಿದ್ದು, ಈಗ ಸಂಚಾರಕ್ಕೆ ಕುತ್ತು ಬಂದಿದೆ.
ಬಂಡೆಕಲ್ಲು ರಸ್ತೆಯನ್ನು ಸಂಪೂರ್ಣ ಆವರಿಸಿದ್ದು, ಬೈಕ್ ಸಂಚಾರ ಕೂಡ ಸಾಧ್ಯವಿಲ್ಲದಂತಾಗಿದೆ. ಈ ಸಂಪರ್ಕಕ್ಕೆ 20ಕ್ಕೂ ಹೆಚ್ಚು ಕುಟುಂಬಗಳು ಅವಲಂಬಿತವಾಗಿವೆ.
ಬಂಡೆಯನ್ನು ಕೂಡಲೇ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವಂತೆ ನಗರ ಸೊಸೈಟಿ ಉಪಾಧ್ಯಕ್ಷ ಹಿಲ್ಕುಂಜಿ ಕುಮಾರ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.