ADVERTISEMENT

ಒಳಮೀಸಲಾತಿ ವರದಿ ಶಿಫಾರಸಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 12:20 IST
Last Updated 16 ಸೆಪ್ಟೆಂಬರ್ 2020, 12:20 IST
ಒಳಮೀಸಲಾತಿ ವರದಿ ಶಿಫಾರಸಿಗೆ ಆಗ್ರಹಿಸಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಕರ್ನಾಟಕ ಮಾದಿಗ ದಂಡೋರ ಸಮಿತಿಯಿಂದ ಪ್ರತಿಭಟನೆ ನಡೆಯಿತು
ಒಳಮೀಸಲಾತಿ ವರದಿ ಶಿಫಾರಸಿಗೆ ಆಗ್ರಹಿಸಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಕರ್ನಾಟಕ ಮಾದಿಗ ದಂಡೋರ ಸಮಿತಿಯಿಂದ ಪ್ರತಿಭಟನೆ ನಡೆಯಿತು   

ಶಿವಮೊಗ್ಗ: ಎ.ಜೆ. ಸದಾಶಿವ ಆಯೋಗದ ಒಳ ಮೀಸಲಾತಿ ವರದಿ ಪುರಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ‘ಮಾದಿಗ ದಂಡೋರ ಸಮಿತಿ’ಯಿಂದಬುಧವಾರ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

‘ಸದಾಶಿವ ಆಯೋಗದ ವರದಿಯನ್ನು ಕೂಡಲೇ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಶಿವಮೊಗ್ಗ ನಗರದ ಹೃದಯಭಾಗದಲ್ಲಿ ಮಾದಿಗ ಸಮಾಜದ ಸಮುದಾಯ ಭವನಕ್ಕೆ ಸುಮಾರು 2 ಎಕರೆ ಜಾಗ ಕೂಡಲೇ ಗುರುತಿಸಿ ಮಂಜೂರು ಮಾಡಬೇಕು. ಸರ್ಕಾರದ ಎಲ್ಲ ಇಲಾಖೆಗಳಲ್ಲೂ ನೇಮಕಾತಿಯಲ್ಲಿ ಹೊರಗುತ್ತಿಗೆಯನ್ನು ಕೂಡಲೇ ರದ್ದುಪಡಿಸಿ ಎಸ್ಸಿ, ಎಸ್ಟಿ ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಇದುವರೆಗೂ ಆದಿಕರ್ನಾಟಕ ಎಸ್ಸಿ ಎಂದು ಜಾತಿ ದೃಢೀಕರಣ ಪತ್ರ ನೀಡುತ್ತಿದ್ದು, ಮಾದಿಗ ಸಮಾಜದವರಿಗೆ ಬದಲಾಗಿ ಮಾದಿಗ ಎಸ್ಸಿ ಎಂದು ಜಾತಿ ದೃಢೀಕರಣ ಪತ್ರ ನೀಡಲು ಜಿಲ್ಲಾಧಿಕಾರಿ ಎಲ್ಲ ತಹಶೀಲ್ದಾರ್‌ಗಳಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಕೆ. ಅಣ್ಣಪ್ಪ, ರಾಜ್ಯ ಉಪಾಧ್ಯಕ್ಷ ತಿಮ್ಲಾಪುರ ಲೋಕೇಶ್, ಎ.ಕೆ. ಹನುಮಂತಪ್ಪ, ಎಚ್.ಎನ್. ಪ್ರಭು, ಶಿವಪ್ಪ, ಇ. ರಮೇಶ್, ಕೆಂಪಮ್ಮ, ಮೀನಾಕ್ಷಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.