ADVERTISEMENT

ಕಾಲು ಜಾರಿ ಬಾವಿಗೆ ಬಿದ್ದು ನಿವೃತ್ತ ಶಿಕ್ಷಕಿ ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 2:21 IST
Last Updated 3 ಜುಲೈ 2021, 2:21 IST

ಶಿವಮೊಗ್ಗ: ಇಲ್ಲಿನ ವೆಂಕಟೇಶನಗರ ನಿವಾಸಿ ನಿವೃತ್ತ ಶಿಕ್ಷಕಿ ನೀಲಮ್ಮ (73) ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ನೀಲಮ್ಮ ವೆಂಕಟೇಶನಗರದ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಮನೆಯ ಕಾಂಪೌಂಡ್‌ನೊಳಗಿದ್ದ ಬಾವಿಗೆ ಅಳವಡಿಸಿದ್ದ ಮೋಟರ್ ಪರಿಶೀಲಿಸಲು ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಆಂಬುಲೆನ್ಸ್ ಚಾಲಕನ ನೆರವಿನಿಂದ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಮೇಲೆತ್ತಿದರು.

ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.