ADVERTISEMENT

ಬಡವರಿಗೆ ಅತ್ಯಂತ ಕಡಿಮೆ ಬೆಲೆಗೆ ಅಕ್ಕಿ ವಿತರಣೆ: ಸಂಸದ ಬಿ.ವೈ.ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 15:49 IST
Last Updated 7 ಮಾರ್ಚ್ 2024, 15:49 IST
ಶಿರಾಳಕೊಪ್ಪ ಪುರಸಭೆ ಮುಂಭಾಗದಲ್ಲಿ ಭಾರತ್ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು
ಶಿರಾಳಕೊಪ್ಪ ಪುರಸಭೆ ಮುಂಭಾಗದಲ್ಲಿ ಭಾರತ್ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು   

ಶಿರಾಳಕೊಪ್ಪ: ದೇಶದಲ್ಲಿ ದುಡ್ಡು ಕೊಟ್ಟರೂ ಅಕ್ಕಿ ಸಿಗುತ್ತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ ಅತ್ಯಂತ ಕಡಿಮೆ ಬೆಲೆಗೆ ಅಕ್ಕಿ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಪಟ್ಟಣದ ಪುರಸಭೆ ಮುಂಭಾಗದಲ್ಲಿ ಭಾರತ್ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೇವಲ ₹ 29ಕ್ಕೆ ಒಂದು ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ಬಿಜೆಪಿ ವಾಗ್ದಾನ ನೀಡಿದಂತೆ ಕೆಲಸ ಮಾಡುತ್ತಿದೆ. ಕಳೆದ 10 ವರ್ಷಗಳಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲದಂತೆ ನರೇಂದ್ರ ಮೋದಿ ಅವರು ಕೆಲಸ ಮಾಡಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು’ ಎಂದರು.

ADVERTISEMENT

ಸಮೀಪದ ಹರಿಗಿ, ಗುಡ್ಡದ ಹೊಸಳ್ಳಿ, ಕಪ್ಪನಹಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ ಭಾರತ್ ಅಕ್ಕಿ ವಿತರಿಸಲಾಯಿತು. ಟೌನ್ ಬಿಜೆಪಿ ಅಧ್ಯಕ್ಷ ಎ.ಸಿ.ಚನ್ನವೀರಪ್ಪ, ಅರಣ್ಯ ನಿಗಮದ ಮಾಜಿ ಉಪಾದ್ಯಕ್ಷ ಕೆ.ರೇವಣಪ್ಪ, ತೊಗರ್ಸಿ ಹನುಂತಪ್ಪ, ಪುರಸಭೆ ಮಾಜಿ ಅಧ್ಯಕ್ಷ ಎಚ್‌.ಎಂ.ಚಂದ್ರಶೇಖರ್, ಉಪಾಧ್ಯಕ್ಷ ಬಿ.ಎಲ್.ಮಂಜುನಾಯ್ಕ, ಅಬ್ದುಲ್ ನವೀದ್, ಬೆಲವಂತನಕೊಪ್ಪ ರಾಘವೇಂದ್ರ, ರೈತ ಮೋರ್ಚಾ ಉಪಾಧ್ಯಕ್ಷ ಇಂದೂಧರ್, ರಾಘು, ಯುವ ಮೊರ್ಚಾ ಅಧ್ಯಕ್ಷ ವೀರಣ್ಣ ಗೌಡ, ಟೌನ್ ಅಧ್ಯಕ್ಷ ಅಗಡಿ ಆದಿತ್ಯ, ಜಿಲ್ಲಾ ಕಾರ್ಯದರ್ಶಿ ಬೆಣ್ಣೆ ಪ್ರವೀಣ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.