ಶಿವಮೊಗ್ಗ: ನಗರದ ರೌಡಿಶೀಟರ್ ಹಂದಿ ಅಣ್ಣಿಯನ್ನು (ಅಣ್ಣಪ್ಪ) ಇಲ್ಲಿನ ವಿನೋಬನಗರದ ಪೋಲಿಸ್ ಚೌಕಿ ಎದುರು ಗುರುವಾರ ಬೆಳಿಗ್ಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ.
ವಿನೋಬ ನಗರ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಮುಖ್ಯ ರಸ್ತೆಯಲ್ಲಿಯೇ ಆರು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಹಲ್ಲೆಯಿಂದ ತಲೆ ಒಡೆದು ಹೋಗಿದ್ದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.
ಹಂದಿ ಅಣ್ಣಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಹೆಬ್ಬೆಟ್ಟು ಮಂಜನ ಸಹವರ್ತಿಯಾಗಿ ಗುರುತಿಸಿಕೊಂಡಿದ್ದನು. ನಾಲ್ಕು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು ಎಂದು ತಿಳಿದುಬಂದಿದೆ.
ಹಾಡುಹಗಲೇ ನಡೆದಿರುವ ಕೊಲೆ ಸ್ಥಳೀಯವಾಗಿ ಆತಂಕದ ವಾತಾವರಣ ಸೃಷ್ಟಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.