ಶಿವಮೊಗ್ಗ: ತುಂಗಾ ಹೊಸಸೇತುವೆ ಬಳಿಯ ವಾದಿ ಎ ಹುದಾ ನಗರದಲ್ಲಿ ರೌಡಿಶೀಟರ್ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಟ್ಯಾಂಕ್ಮೊಹಲ್ಲಾದ ಮಹಮದ್ ಜೈದಾನ್ (22) ಕೊಲೆಯಾದ ಯುವಕ. ವಾರದ ಹಿಂದಷ್ಟೆ ಮನೆಯನ್ನು ವಾದಿ ಎ ಹುದಾ ನಗರಕ್ಕೆ ಸ್ಥಳಾಂತರಿಸಿದ್ದ. ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳು ಪತ್ತೆಯಾಗಿಲ್ಲ. ಜೈದಾನ್ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಹೊಡೆದಾಟದ ಎರಡು ಪ್ರಕರಣಗಳು ದಾಖಲಾಗಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.