ADVERTISEMENT

ಶಾಲಾ ಬಸ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 3:19 IST
Last Updated 19 ಡಿಸೆಂಬರ್ 2025, 3:19 IST
ಸಾಗರ ತಾಲ್ಲೂಕಿನ ಇಡುವಾಣಿ ಸಮೀಪ ಗುರುವಾರ ಕೆಎಸ್ಆರ್‌ಟಿಸಿ ಬಸ್ ಹಾಗೂ ಪ್ರಗತಿ ಸಂಯುಕ್ತ ಶಾಲೆಯ ಬಸ್ ನಡುವೆ ಡಿಕ್ಕಿ ಸಂಭವಿಸಿದೆ
ಸಾಗರ ತಾಲ್ಲೂಕಿನ ಇಡುವಾಣಿ ಸಮೀಪ ಗುರುವಾರ ಕೆಎಸ್ಆರ್‌ಟಿಸಿ ಬಸ್ ಹಾಗೂ ಪ್ರಗತಿ ಸಂಯುಕ್ತ ಶಾಲೆಯ ಬಸ್ ನಡುವೆ ಡಿಕ್ಕಿ ಸಂಭವಿಸಿದೆ   

ಸಾಗರ: ತಾಲ್ಲೂಕಿನ ಇಡುವಾಣಿ ಗ್ರಾಮದ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ ನಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಾಹನದ ನಡುವೆ ಗುರುವಾರ ಮುಖಾಮುಖಿ ಡಿಕ್ಕಿಯಾಗಿದ್ದು ಎರಡೂ ಬಸ್‌ಗಳ ಚಾಲಕರು , ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಸಾಗರದಿಂದ ಕಾರ್ಗಲ್ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಕಾರ್ಗಲ್‌ನಿಂದ ಸಾಗರಕ್ಕೆ ಬರುತ್ತಿದ್ದ ಶಾಲಾ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ.

ಶಾಲಾ ವಾಹನದ ಬಸ್ ಚಾಲಕ ಪ್ರವೀಣ್, ಸರ್ಕಾರಿ ಬಸ್ ಚಾಲಕ ಆರೀಫ್, ವಿದ್ಯಾರ್ಥಿ ಸಾತ್ವಿಕ್ ಅವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ADVERTISEMENT