ಶಿವಮೊಗ್ಗ:ಅಕ್ರಮ ಮರಳು ದಂಧೆಯಲ್ಲಿ ಶಾಮೀಲಾದ ಆರೋಪಕ್ಕೆ ಸಿಲುಕಿರುವ ಶಿವಮೊಗ್ಗ ಡಿವೈಎಸ್ಪಿ ಸುದರ್ಶನ್, ಪಿಎಸ್ಐ ಭಾರತಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಜ. 14ಕ್ಕೆ ಮುಂದೂಡಿದೆ.
ನ್ಯಾಯಾಧೀಶರಾದ ಪ್ರಭಾವತಿ ಎಂ. ಹಿರೇಮಠ ಅವರು ಈ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.
ಗ್ರಾಮಾಂತರ ಸಿಪಿಐ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿರುವ ಹೆಡ್ ಕಾನ್ಸ್ಟೆಬಲ್ ಯಲ್ಲಪ್ಪ ಅವರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಆದೇಶ ಹೊರಬಿದ್ದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.