ADVERTISEMENT

ಮನ್ಸೂನ್ ಆರಂಭ; ಮರಳು ಗಣಿಗಾರಿಕೆ ಸ್ಥಗಿತ

ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 12:51 IST
Last Updated 16 ಜೂನ್ 2020, 12:51 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು.   

ಶಿವಮೊಗ್ಗ: ಜಿಲ್ಲೆಯಲ್ಲಿ ಮಾನ್ಸೂನ್ ಮುಗಿಯುವವರೆಗೆಮರಳು ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿಅವರು ಮಾತನಾಡಿದರು.

ಮರಳು ಗಣಿಗಾರಿಕೆ ಮಾನ್ಸೂನ್ ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಸ್ಟಾಕ್‍ಯಾರ್ಡ್‍ಗಳಲ್ಲಿರುವ ಮರಳು ನಿಗದಿತ ಕಾಲಮಿತಿಯ ಒಳಗಾಗಿ ಸಾಗಣೆಮಾಡಲು ಅವಕಾಶ ನೀಡಲಾಗುವುದು. ಮಾನ್ಸೂನ್ ಅವಧಿಯಲ್ಲಿ ಮರಳುಗಾರಿಕೆ ನಡೆಯಲು ಅವಕಾಶ ನೀಡಬಾರದು. ತಾಲ್ಲೂಕುಮಟ್ಟದ ಸಮಿತಿ ಇದಕ್ಕೆ ಜವಾಬ್ದಾರಿ ಎಂದರು.

ADVERTISEMENT

ತಪಾಸಣೆ ಚುರುಕು: ಪ್ರಸಕ್ತ ಸಾಲಿನಲ್ಲಿ ಮೇ ಅಂತ್ಯದವರೆಗೆ ಅಕ್ರಮ ಮರಳು ಸಾಗಣೆ ಮಾಡಿದ16 ವಾಹನಗಳನ್ನು ಜಪ್ತಿ ಮಾಡಲಾಗಿದೆ. ₨1.48 ಲಕ್ಷ ದಂಡ ವಸೂಲು ಮಾಡಲಾಗಿದೆ. ಮರಳು ಸಾಗಣೆಯಿಂದ ₨ 24.23 ಲಕ್ಷ ರಾಜಧನ ಸಂಗ್ರಹಿಸಲಾಗಿದೆ. ಹೆಚ್ಚುವರಿ ಪಾವತಿ ಮೊತ್ತ ₨ 2.61 ಕೋಟಿ ಸಂಗ್ರಹಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆಯಿಂದ ₨ 8 ಲಕ್ಷ ರಾಜಧನ, ಕಟ್ಟಡ ಕಲ್ಲುಗಣಿಗಾರಿಕೆಯಿಂದ ₨ 8.78 ಲಕ್ಷ ರಾಜಧನ ಪಡೆಯಲಾಗಿದೆ.ಕಟ್ಟಡ ಕಲ್ಲು ಅಕ್ರಮ ಗಣಿಗಾರಿಕೆ ಮತ್ತು ಸಾಗಣಿಕೆಯಿಂದ ₨ 3.96 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಮಾಹಿತಿ ನೀಡಿದರು.

ಅನಧಿಕೃತ ಮರಳುಗಾರಿಕೆ, ಅಕ್ರಮ ಗಣಿಗಾರಿಕೆ ತಡೆಯಲು ತಪಾಸಣೆ ತೀವ್ರಗೊಳಿಸಬೇಕು.ಸರ್ಕಾರಿ ಆಸ್ತಿ ಕಳ್ಳತನದ ಮೊಕದ್ದಮೆ ದಾಖಲಿಸಬೇಕು.ಗ್ರಾಮ ಪಂಚಾಯಿತಿಮಟ್ಟದಲ್ಲಿ ಹಳ್ಳಕೊಳ್ಳದಿಂದ ಮರಳು ತೆಗೆಯಲು ಬ್ಲಾಕ್ ಗುರುತಿಸಬೇಕು.ತಾಲ್ಲೂಕುಮಟ್ಟದ ಸಮಿತಿ ಶಿಫಾರಸು ಬಂದರೆ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ಸಮಿತಿ ಪರಿಶೀಲಿಸಬೇಕು ಎಂದು ಶಿವಕುಮಾರ್ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಯೋಜನಾ ನಿರ್ದೇಶಕ ವೀರಾಪುರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.