ADVERTISEMENT

ಪರಿಶಿಷ್ಟರ ಅನುದಾನ ಅನ್ಯ ಕಾರ್ಯಕ್ಕೆ ಬಳಕೆ: ದಸಂಸ ಖಂಡನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 10:17 IST
Last Updated 12 ಜುಲೈ 2021, 10:17 IST
ಶಿವಮೊಗ್ಗದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪರಿಶಿಷ್ಟರಿಗೆ   ಮೀಸಲಿಟ್ಟಿದ್ದ ಅನುದಾನ ಬೇರೆ ಅಭಿವೃದ್ಧಿ ಕಾರ್ಯಗಳಿಗೆ ಬಳಸಿರುವ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪರಿಶಿಷ್ಟರಿಗೆ   ಮೀಸಲಿಟ್ಟಿದ್ದ ಅನುದಾನ ಬೇರೆ ಅಭಿವೃದ್ಧಿ ಕಾರ್ಯಗಳಿಗೆ ಬಳಸಿರುವ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಪರಿಶಿಷ್ಟರಿಗೆ 2019–20ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ಅನುದಾನವನ್ನು ಬೇರೆ ಅಭಿವೃದ್ಧಿ ಕಾರ್ಯಗಳಿಗೆ ಬಳಸಿರುವ ಧೋರಣೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸರ್ಕಾರ ದಲಿತರ ಕಲ್ಯಾಣಕ್ಕಾಗಿ ಆಯಾ ಜಾತಿಗೆ ಅನುಗುಣವಾಗಿ ನಿಗಮ ಮಂಡಳಿ ಸ್ಥಾಪಿಸಿದೆ. ಬಜೆಟ್‌ನಲ್ಲಿ ಹಣ ಇಟ್ಟಿದೆ. ಶಿವಮೊಗ್ಗದಲ್ಲಿ ಎಸ್‌ಸಿಪಿ ಟಿಎಸ್‌ಪಿಯ ಹಣವನ್ನು ವಿದ್ಯಾನಗರದ ಪ್ರಿಯಾಂಕಾ ಬಡಾವಣೆಯ ಖಾಸಗಿ ಲೇಔಟ್‌ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿದರು.

ದಲಿತರಿಗೆ ಮೀಸಲಾಗಿಟ್ಟಿದ್ದ ಹಣ ಬೇರೆ ಕಾರ್ಯಕ್ಕೆ ಬಳಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿದರು.

ADVERTISEMENT

ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಹೆಚ್. ಹಾಲೇಶಪ್ಪ, ಶಿವಕುಮಾರ್, ಜಗ್ಗು, ಪರಮೇಶ್ ಸೂಗೂರು, ಕೃಷ್ಣಪ್ಪ, ಆನಂದ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.