ADVERTISEMENT

ಶಾಸಕ ಈಶ್ವರಪ್ಪ ಮನೆಗೆ ಭದ್ರತೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 5:28 IST
Last Updated 31 ಜುಲೈ 2022, 5:28 IST
ಶಿವಮೊಗ್ಗದ ಗುಡ್ಡಪ್ಪ ಶೆಡ್‌ನಲ್ಲಿರುವ ಕೆ.ಎಸ್. ಈಶ್ವರಪ್ಪ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಶಿವಮೊಗ್ಗದ ಗುಡ್ಡಪ್ಪ ಶೆಡ್‌ನಲ್ಲಿರುವ ಕೆ.ಎಸ್. ಈಶ್ವರಪ್ಪ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.   

ಶಿವಮೊಗ್ಗ: ಕಾರ್ಯಕರ್ತರಿಗೆ ಪ್ರಬುದ್ಧತೆ ಇಲ್ಲ ಎಂದು ಶಾಸಕ ಈಶ್ವರಪ್ಪ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ಮನೆಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

ಶಿವಮೊಗ್ಗದ ಗುಡ್ಡಪ್ಪ ಶೆಡ್‌ನಲ್ಲಿರುವ ಕೆ.ಎಸ್. ಈಶ್ವರಪ್ಪ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.‌30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಪ್ರಬುದ್ಧತೆ ಇಲ್ಲ ಎಂದು ಮಾಧ್ಯಮಗಳಿಗೆ ಅವರು ನೀಡಿದ್ದ ಹೇಳಿಕೆಗೆ ಪಕ್ಷದ ಪಾಳಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಗುಂಡಪ್ಪ ಶೆಡ್‌ನರೈಲ್ವೆ ಗೇಟ್ ಬಳಿಯಲ್ಲೇ ಕಾರ್ಯಕರ್ತರನ್ನು ತಡೆಯಲು ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.