ADVERTISEMENT

ಗಾಂಜಾ ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2021, 4:46 IST
Last Updated 28 ಮಾರ್ಚ್ 2021, 4:46 IST

ಶಿವಮೊಗ್ಗ: ಭದ್ರಾವತಿಯಸಿದ್ದಾಪುರದ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ನ್ಯೂಟೌನ್ ಠಾಣಾ ಪೊಲೀಸರು ಬಂಧಿಸಿದ್ದು, 1 ಕೆ.ಜಿ. 800ಗ್ರಾಂ ತೂಕದ ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಭದ್ರಾವತಿ ಟೌನ್ ವಾಸಿಗಳಾದ ಚೆಲುವಕುಮಾರ್, ಧೀರಜ್ ಸಿಂಗ್ ಬಂಧಿತರು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಭದ್ರಾವತಿ ಉಪವಿಭಾಗದ ಡಿವೈಎಸ್ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ನಗರ ವೃತ್ತದ ಸಿಪಿಐ ರಾಘವೇಂದ್ರ ಕಾಂಡಿಕೆ ನೇತೃತ್ವದ ತಂಡ ದಾಳಿ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT