ADVERTISEMENT

ಬೆಂಗಳೂರಿಗೆ ಶರಾವತಿ ನೀರು ಒಯ್ಯುವ ಪ್ರಸ್ತಾವ ಕೈ ಬಿಡಿ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 16:04 IST
Last Updated 29 ಆಗಸ್ಟ್ 2024, 16:04 IST
ಬೆಂಗಳೂರಿನಲ್ಲಿ ಗುರುವಾರ ನಡೆದ ಸುತ್ತೂರು ಮಠದ 23ನೆಯ ಪೀಠಾಧಿಪತಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೆಯ ಜಯಂತಿಯ ಸಮಾರಂಭದಲ್ಲಿ ಬಸವ ಕೇಂದ್ರದ ಮರುಳಸಿದ್ದ ಸ್ವಾಮೀಜಿ, ಸಚಿವ ಈಶ್ವರ ಖಂಡ್ರೆ, ಎಲ್. ರೇವಣಸಿದ್ಧಯ್ಯ, ಸಂದೀಪ್ ಪಾಟೀಲ್, ಸಿ. ಸೋಮಶೇಖರ್ ಇದ್ದರು.
ಬೆಂಗಳೂರಿನಲ್ಲಿ ಗುರುವಾರ ನಡೆದ ಸುತ್ತೂರು ಮಠದ 23ನೆಯ ಪೀಠಾಧಿಪತಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೆಯ ಜಯಂತಿಯ ಸಮಾರಂಭದಲ್ಲಿ ಬಸವ ಕೇಂದ್ರದ ಮರುಳಸಿದ್ದ ಸ್ವಾಮೀಜಿ, ಸಚಿವ ಈಶ್ವರ ಖಂಡ್ರೆ, ಎಲ್. ರೇವಣಸಿದ್ಧಯ್ಯ, ಸಂದೀಪ್ ಪಾಟೀಲ್, ಸಿ. ಸೋಮಶೇಖರ್ ಇದ್ದರು.   

ಶಿವಮೊಗ್ಗ: ಶರಾವತಿ ನೀರನ್ನು ಬೆಂಗಳೂರು ಮಹಾನಗರಕ್ಕೆ ಕೊಂಡೊಯ್ಯುವ ಯೋಜನೆಯನ್ನು ಕೈ ಬಿಡುವಂತೆ ಅರಣ್ಯ, ಜೀವಿಶಾಸ್ತ್ರ ವಿಜ್ಞಾನ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಗೆ ಶಿವಮೊಗ್ಗ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಗುರುವಾರ ನಡೆದ ಸುತ್ತೂರು ಮಠದ 23ನೆಯ ಪೀಠಾಧಿಪತಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೆಯ ಜಯಂತಿಯ ಸಂದರ್ಭದಲ್ಲಿ ಅವರು ವೇದಿಕೆಯಲ್ಲಿದ್ದ ಸಚಿವ ಈಶ್ವರ ಖಂಡ್ರೆ ಅವರಿಗೆ ಕೋರಿದರು.

ಮಲೆನಾಡಿನ ಪಶ್ಚಿಮಘಟ್ಟಗಳ ಜೀವವೈವಿಧ್ಯಕ್ಕೆ  ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವುದರಿಂದ ತೊಂದರೆಯಾಗಲಿದೆ. ಅರಣ್ಯ ನಾಶವಾಗಲಿದೆ. ಹೀಗಾಗಿ ಯೋಜನೆಯನ್ನು ಕೈಬಿಡಿ ಎಂದು ಆಶೀರ್ವಚನದಲ್ಲಿ ಹೇಳಿದರು.

ADVERTISEMENT

ವೇದಿಕೆಯಲ್ಲಿ ನಿವೃತ್ತ ಪೋಲಿಸ್ ಮಹಾನಿರ್ದೇಶಕ ಎಲ್. ರೇವಣಸಿದ್ಧಯ್ಯ, ಕೆಎಸ್ಆರ್‌ಪಿ ಐಜಿಪಿ ಸಂದೀಪ್ ಪಾಟೀಲ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ಸೋಮಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.