ADVERTISEMENT

2050ರ ವೇಳೆಗೆ ಶಿವಮೊಗ್ಗ: ಪರಿಕಲ್ಪನೆ ಸಿದ್ಧ

ಮಾಧ್ಯಮ ಸಂವಾದದಲ್ಲಿ ಎನ್. ಗೋಪಿನಾಥ್

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 8:34 IST
Last Updated 20 ನವೆಂಬರ್ 2022, 8:34 IST
ಶಿವಮೊಗ್ಗದಲ್ಲಿ ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ನೇತೃತ್ವದಲ್ಲಿ ಮಾಧ್ಯಮ ಸಂವಾದ ನಡೆಯಿತು
ಶಿವಮೊಗ್ಗದಲ್ಲಿ ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ನೇತೃತ್ವದಲ್ಲಿ ಮಾಧ್ಯಮ ಸಂವಾದ ನಡೆಯಿತು   

ಶಿವಮೊಗ್ಗ: 2050ರ ವೇಳೆಗೆ ಶಿವಮೊಗ್ಗ ಜಿಲ್ಲೆಯು ಎಲ್ಲ ಕ್ಷೇತ್ರಗಳಲ್ಲಿ ಅತ್ಯಂತ ಸದೃಢವಾಗಿ ರೂಪುಗೊಳ್ಳಬೇಕಾದರೆ ಅಗತ್ಯವಿರುವ ಯೋಜನೆಗಳ ಅನುಷ್ಠಾನ ಸಂಬಂಧ ಶಿವಮೊಗ್ಗ ವಿಷನ್ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ವಿಷನ್– 2050 ವಿಷಯ ಕುರಿತು ಮಾಧ್ಯಮ ಮಿತ್ರರೊಂದಿಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಕಾ ಕ್ಷೇತ್ರಗಳಲ್ಲಿ ಶಿವಮೊಗ್ಗದಲ್ಲಿ ಆಗಬೇಕಿರುವ ಯೋಜನೆಗಳ ಅನುಷ್ಠಾನದ ಬಗ್ಗೆ ಎಲ್ಲ ಕ್ಷೇತ್ರಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

‘ಶಿವಮೊಗ್ಗದಲ್ಲಿ ಮೂಲಸೌಕರ್ಯ, ಪಾರ್ಕಿಂಗ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಕಾಣುತ್ತಿದ್ದೇವೆ. ಶಿವಮೊಗ್ಗ ನಗರ 25-30 ವರ್ಷಗಳಲ್ಲಿ ಬೆಳೆಯಬಹುದಾದ ವೇಗಕ್ಕೆ ಅನುಗುಣವಾಗಿ ರಸ್ತೆ, ಪಾರ್ಕಿಂಗ್, ಮೂಲಸೌಕರ್ಯ ಒದಗಿಸುವ ಬಗ್ಗೆ ಯೋಜನೆ ಅನುಷ್ಠಾನಗೊಳಿಸುವ ಅಗತ್ಯವಿದೆ’ ಎಂದುಪತ್ರಕರ್ತ ಗೋಪಾಲ್ ಯಡಗೆರೆ ಹೇಳಿದರು.
‘ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗಾಗಲೇ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಜೊತೆಯಲ್ಲಿ ಪೂರಕ
ವಾಗಿ ಅನುಷ್ಠಾನ ಮಾಡಬಹುದಾದ ಯೋಜನೆಗಳ ಸಲಹೆ ನೀಡಿದಲ್ಲಿಕ್ಷೇತ್ರದ ಅಭಿವೃದ್ಧಿ ವೇಗಗತಿಯಲ್ಲಿ ಸಾಗಲಿದೆ’ ಎಂದುಪತ್ರಕರ್ತ ಅರುಣ್ ಅಭಿಪ್ರಾಯಪಟ್ಟರು.

‘ಕೃಷಿ ‌ಸಂಬಂಧಿಸಿ ಸ್ಥಳೀಯ ಉತ್ಪನ್ನಗಳಿಗೆ ಪೂರಕವಾದ ಆಹಾರ ಮೌಲ್ಯವರ್ಧಿತ ಕೈಗಾರಿಕೆಗಳಿಗೆ ಆದ್ಯತೆ ನೀಡಿದಲ್ಲಿ ಉದ್ಯೋಗ ಸೃಷ್ಟಿ ಸೇರಿದಂತೆ ಜಿಲ್ಲಾ ಮಟ್ಟದಲ್ಲಿ ಆರ್ಥಿಕತೆ ಹೆಚ್ಚಿಸಲು ಸಹಕಾರಿಯಾಗುತ್ತದೆ’ ಎಂದುಪತ್ರಕರ್ತ ಕೃಷ್ಣ ಬನಾರಿ ತಿಳಿಸಿದರು.

ಪತ್ರಕರ್ತರಾದ ರವಿಕುಮಾರ್, ಅರವಿಂದ ಅಕ್ಲಾಪುರ, ಗುರುರಾಜ್ ಮಾತನಾಡಿದರು. ಎಲ್ಲ ಸಂಗತಿ
ಗಳ ಒಟ್ಟುಗೂಡಿಸಿ ವರದಿ ಅನುಷ್ಠಾನಗೊಳಿಸುವಂತೆ ಸಲ್ಲಿಸಲಾಗುವುದು ಎಂದು ಗೋಪಿನಾಥ್ ಹೇಳಿದರು.

ಸಂಘದ ಸಹ ಕಾರ್ಯದರ್ಶಿ ಜಿ. ವಿಜಯ್‌ಕುಮಾರ್, ಕಾರ್ಯದರ್ಶಿ ವಸಂತ ಹೋಬಳಿದಾರ್, ನಿರ್ದೇಶಕರಾದ ಪ್ರದೀಪ್ ಯಲಿ, ಮರಿಸ್ವಾಮಿ, ರಮೇಶ್ ಹೆಗ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.