ADVERTISEMENT

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಸದಸ್ಯತ್ವ ವಜಾ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 11:39 IST
Last Updated 15 ಜುಲೈ 2020, 11:39 IST

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ತನಿಖೆ ಪೂರ್ಣಗೊಳ್ಳುವವರೆಗೆ ಸಹಕಾರಿ ಕ್ಷೇತ್ರದ ಯಾವುದೇ ಸಹಕಾರ ಬ್ಯಾಂಕ್ ಅಥವಾ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದುವಂತಿಲ್ಲ ಎಂದು ಸಹಕಾರ ಇಲಾಖೆ ಜಂಟಿ ನಿಬಂಧಕ ಪಾಂಡುರಂಗ ಆದೇಶಿಸಿದ್ದಾರೆ.

2014ರಲ್ಲಿ ಡಿಸಿಸಿ ಬ್ಯಾಂಕ್ ಗಾಂಧಿಬಜಾರ್ ಶಾಖೆಯಲ್ಲಿ ನಡೆದ ಚಿನ್ನ ಅಡಮಾನ ಸಾಲದ ಹಗರಣ, ನಿಯಮ ಮೀರಿ ಜಿಲ್ಲೆಯ ಹೊರಗಿನ ಕೈಗಾರಿಕೆಗಳಿಗೆ ನೀಡಿರುವ ಸಾಲದ ತನಿಖೆಗೆ ಸಹಕಾರಿಯಾಗುವಂತೆ ಈ ಆದೇಶ ಹೊರಡಿಸಲಾಗಿದೆ.

ADVERTISEMENT

ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆ: ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ರಾಜಣ್ಣ ರೆಡ್ಡಿ ಅವರನ್ನೂ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಆ ಸ್ಥಾನಕ್ಕೆ ಸಹಕಾರ ಇಲಾಖೆ ಉಪನಿಬಂಧಕ ನಾಗೇಶ್ ಡೋಂಗ್ರೆ ಅವರನ್ನು ನೇಮಕಗೊಳಿಸಿದೆ.

‘ನಕಲಿ ಚಿನ್ನ ಅಡಮಾನವಿಟ್ಟು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿತ್ತು. ಹೊರ ಜಿಲ್ಲೆಗಳಿಗೆ ಸಾಲ ನೀಡಲಾಗಿದೆ. ಈ ಎಲ್ಲ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಬೇಕು. ಸರ್ಕಾರ ಮೊದಲ ಹೆಜ್ಜೆಯಾಗಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ’ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.