ಶಿವಮೊಗ್ಗ: ಬೈಪಾಸ್ ರಸ್ತೆಯ ಹೊಸ ಸೇತುವೆ ಬಳಿ ಶುಕ್ರವಾರ ತುಂಗಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲ್ಲೂಕಿನ ಹುರಳಿಹಳ್ಳಿ ಗ್ರಾಮದ ಸಂತೋಷ್ (25), ಕಾಕನ ಹಸೂಡಿಯ ಅನುಷಾ (20) ಆತ್ಮಹತ್ಯೆ ಮಾಡಿಕೊಂಡವರು.
ಮಧ್ಯಾಹ್ನ 3ರ ಸಮಯದಲ್ಲಿ ಇಬ್ಬರೂ ಚಪ್ಪಲಿ ಬಿಟ್ಟು, ಅಲ್ಲಿ ಗುಲಾಬಿ ಹೂವಿಟ್ಟಿದ್ದಾರೆ. ನಂತರ ಕೈಗೆ ವೇಲು ಸುತ್ತಿಕೊಂಡು ನದಿಗೆ ಹಾರಿದ್ದಾರೆ. ಸ್ಥಳೀಯರು ಯುವತಿಯನ್ನು ರಕ್ಷಿಸಿ, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಅಗ್ನಿ ಶಾಮಕ ಸೇವೆಯ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದರು.
ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.